ತುಮಕೂರು ನಗರದಲ್ಲಿ ಹರಿದಾಡುತ್ತಿದೆ ಕೇಸರಿಯ ಕುರುಡು ಕಾಂಚಾಣ

 

 

ತುಮಕೂರು – ಚುನಾವಣೆ ಕೊನೆ ಹಂತ ತಲುಪಿದ್ದು ಎಲ್ಲಾ ಅಭ್ಯರ್ಥಿಗಳು ತಮ್ಮ ತಮ್ಮ ರಾಜ ತಾಂತ್ರಿಕತೆ ತಂತ್ರಗಾರಿಕೆ ನಡೆಸುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಜ್ಯೋತಿ ಗಣೇಶ್ ಬೆಂಬಲಿಗರು ಮತದಾರರಿಗೆ ಹಣ ಹಂಚುವುದರಲ್ಲಿ ನಿರತರಾಗಿದ್ದಾರೆ.

 

 

 

ಚುನಾವಣಾ ಪ್ರಚಾರದ ಕೊನೆಯ ದಿನವಾದ ಸೋಮವಾರ ಮದ್ಯನ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಕುರುಡು ಕಾಂಚನದ ನರ್ತನ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಅಭ್ಯರ್ಥಿಯ ಹಸ್ತ ಪ್ರತಿ ಹಾಗೂ ಹಣ ಹಂಚುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

 

 

 

 

ತುಮಕೂರು ನಗರ ವಿಧಾನಸಭಾ ಕ್ಷೇತ್ರ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿದ್ದು ಮೂರು ಪಕ್ಷದ ಅಭ್ಯರ್ಥಿಗಳು ಹಾಗೂ ಸ್ವತಂತ್ರ ಅಭ್ಯರ್ಥಿ ನಡುವೆ ನಗರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಬಿಜೆಪಿ ಅಭ್ಯರ್ಥಿ ವಾಮ ಮಾರ್ಗದ ಮೂಲಕ ಹಣ ಕೊಟ್ಟು ಮತವನ್ನು ಖರೀದಿಗೆ ಮುಂದಾಗಿರುವುದು ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

 

 

 

 

ಇನ್ನು ಸರ್ಕಾರ ಎಷ್ಟೇ ಕಠಿಣ ಮಾರ್ಗವನ್ನು ಅನುಸರಿಸಿ ಚುನಾವಣಾ ಅಕ್ರಮಗಳನ್ನು ತಡೆ ಹಿಡಿಯುವ ಸಲುವಾಗಿ ಸಾಕಷ್ಟು ಕ್ರಮ ತೆಗೆದುಕೊಳ್ಳುತ್ತಿದ್ದರು ಸಹ ಈ ತರಹದ ಘಟನೆಗಳು ನಡೆಯುತ್ತಿದ್ದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ತರುತ್ತಿದ್ದಾರೆ.

 

 

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಮುಖಂಡರು ಮತ ಖರೀದಿಗೆ ಮುಂದಾಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ.

Leave a Reply

Your email address will not be published. Required fields are marked *

error: Content is protected !!