ಮುಂಜಾಗ್ರತೆ ಕ್ರಮಗಳಿಲ್ಲದೇ ಡೆಂಗ್ಯೂಗೆ ತುಮಕೂರಿನಲ್ಲಿ ಮತ್ತೊಂದು ಬಲಿ !?

 

 

 

 

ತುಮಕೂರು – ರಾಜ್ಯದ್ಯಂತ ದಿನೇ ದಿನೇ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ ತುಮಕೂರು ನಗರದಲ್ಲಿ ಯುವಕನೊಬ್ಬ ಡೆಂಗ್ಯೂ ಜ್ವರಕ್ಕೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

 

 

 

 

 

 

ತುಮಕೂರು ನಗರದ ಶಾಂತಿನಗರ ನಿವಾಸಿ ವಿಕಾಸ್ 24 ವರ್ಷದ ಯುವಕ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಎಡೆಮಾಡಿದೆ. ಕಳೆದ ನಾಲ್ಕು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಜ್ವರಕ್ಕೆ ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದ ಯುವಕ ವಿಕಾಸ್ ಜ್ವರ ನಿಯಂತ್ರಣಕ್ಕೆ ಬಾರದ ಕಾರಣ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಆದರೆ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ತುಮಕೂರಿನಿಂದ ಬೆಂಗಳೂರಿನ ವಿಕ್ಟೋರಿಯಾ ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.

 

 

 

 

 

ಚಿಕಿತ್ಸೆ ಫಲಿಸದೆ ಯುವಕ ವಿಕಾಸ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ. ಶಾಂತಿನಗರದಲ್ಲಿ ಕಳೆದ ಕೆಲ ದಿನಗಳ ಹಿಂದೆ 18 ವರ್ಷದ ಯುವತಿ ಗುಣಶ್ರೀ ಎಂಬ ಯುವತಿಯೂ ಸಹ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟ ಬೆನ್ನಲ್ಲೇ ಮತ್ತುರ್ವ ಯುವಕ ಬಲಿಯಾಗಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚು ಮಾಡಿದೆ.

 

 

 

ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತು ಡೆಂಗ್ಯೂ ನಿಯಂತ್ರಣಕ್ಕೆ ಮುಂದಾಗಬೇಕು ಎಂಬುದು ಸ್ಥಳೀಯರ ಒತ್ತಾಯ.

Leave a Reply

Your email address will not be published. Required fields are marked *

error: Content is protected !!