ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ತಕ್ಷಣವೆ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಬಿ.ಸುರೇಶ್‌ಗೌಡ ಎಚ್ಚರಿಕೆ - Vidyaranjaka

ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ತಕ್ಷಣವೆ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಬಿ.ಸುರೇಶ್‌ಗೌಡ ಎಚ್ಚರಿಕೆ

ತುಮಕೂರು : ತುಮಕೂರು ಜಿಲ್ಲೆಗೆ ಹಂಚಿಕೆಯಾಗಿರುವ ಹೇಮಾವತಿ ನೀರನ್ನು ರಾಮನಗರ ಮತ್ತು ಮಾಗಡಿ ತಾಲೂಕಿಗೆ ಹರಿಸಲು ಕುಣಿಗಲ್ ತಾಲೂಕಿನಲ್ಲಿ ನಡೆಯುತ್ತಿರುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ತಕ್ಷಣವೆ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡು ವುದಾಗಿ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್‌ಗೌಡ ಎಚ್ಚರಿಕೆ ನೀಡಿದರು.

 

 

 

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಮಾತನಾಡಿ, ಎಕ್ಸ್ ಪ್ರೆಸ್ ಲಿಂಕ್ ನಾಲೆ ನಿರ್ಮಾಣಕ್ಕೆ ಪೊಲೀಸ್ ಸರ್ಪಗಾವಲಿನಲ್ಲಿ ಕಾಮಗಾರಿ ನಡೆದಿದ್ದು, ಇದನ್ನು ಗಮನಿಸಿದ ರೈತರು, ಸಾರ್ವಜನಿಕರು ಬಿಜೆಪಿ ಅನೇಕ ಮುಖಂಡರು ಸ್ಥಳಕ್ಕೆ ತೆರಳಿ ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಪ್ರತಿಭಟನಾ ಕಾರರನ್ನು ಬಂಧಿಸಿದ್ದು ಸರಿಯಲ್ಲ ಎಂದರು.

 

 

 

 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ದೂರವಾಣಿ ಕರೆ ಮಾಡಿ ಕಾಮಗಾರಿ ನಡೆಯುತ್ತಿರುವ ಬಗ್ಗೆ ಪ್ರಸ್ತಾಪಿ ಸಿದ್ದು ತುಮಕೂರು ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು, ಗಣ್ಯರು, ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ಸಭೆಯನ್ನು ಸೋಮವಾರ ಕರೆದು ಚರ್ಚಿಸಿ ಮುಂದಿನ ನಿರ್ಧಾರ ತೆಗೆದು ಕೊಳ್ಳಲಾಗುವುದು ಎಂದರು.

 

 


ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಸರ್ವಪಕ್ಷ ನಿಯೋಗವೊಂದನ್ನು ಕೊಂಡೊಯ್ಯಲು ನಿರ್ಧರಿಸಿದ್ದು ಶೀಘ್ರದಲ್ಲೆ ಈ ಬಗ್ಗೆ ನಿರ್ಧಾರ ತಿಳಿಸುವುದಾಗಿ ಹೇಳಿದರು. ನಗರ ಕ್ಷೇತ್ರದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಜಿಲ್ಲೆಗೆ ನಿಗಧಿಯಾಗಿರುವ ಹೇಮಾವತಿ ನೀರಿನಲ್ಲಿ ಕುಣಿಗಲ್ ತಾಲೂಕಿಗೆ ಶೇ.12ರಷ್ಟು ನೀರು ನಿಗಧಿಯಾಗಿದ್ದು ಆ ನೀರನ್ನು ಹರಿಸಿ ಕೊಳ್ಳಲು ನಮ್ಮ ವಿರೋಧವಿಲ್ಲ. ಜಿಲ್ಲೆಯ ಪಾಲಿನ ನೀರನ್ನು ರಾಮನಗರ, ಮಾಗಡಿಗೆ ಹರಿಸುವುದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದರು. ಗುಬ್ಬಿ ತಾಲೂಕಿನ ಬಿಜೆಪಿಲ ಮುಖಂಡ ದಿಲೀಕ್‌ಕುಮಾರ್ ಮಾತನಾಡಿ, ಸರ್ಕಾರಿ ಜಾಗ ಮುಜರಾಯಿ ದೇವಾಲಯ ಗಳ ಆಸ್ತಿಗಳಲ್ಲಿ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ಸಾವಿರಾರು ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಸೇರಿದ ಆಸ್ತಿಯನ್ನು ಭೂಸ್ವಾಧೀನಪಡಿಸಿ ಕೊಳ್ಳದೆ ಅದಕ್ಕೆ ಅಗತ್ಯ ಪರಿಹಾರ ನೀಡದೆ ಕಾಮಗಾರಿ ಆರಂಭಿಸುವAತಿಲ್ಲ ಎಂದರು.

 

ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಮುಖಂಡರಾದ ಎಸ್. ವಿಜಯಕುಮಾರ್, ಟಿ.ಆರ್.ಸದಾಶಿವಯ್ಯ, ಗೂಳೂರು ಶಿವಕುಮಾರ್, ಜ್ಯೋತಿ ತಿಪ್ಪೇಸ್ವಾಮಿ, ಜಗದೀಶ್ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!