ಸ್ಯಾಂಟ್ರೋ ರವಿಯ ಬಂಧನ ಕೆಲವೊಂದು ಪಕ್ಷದಲ್ಲಿ ಕಳವಳ ಶುರು !!!!!

ಮಂಚ ಪ್ರಕರಣ ಮತ್ತು ವರ್ಗಾವಣೆ ದಂಧೆಯಲ್ಲಿ ತೊಡಗಿಸಿಕೊಂಡು ಆರೋಪದ ಮೇಲೆ ತಲೆ ಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ.

 

 

 

ವಂಚನೆ ಮಾಡಿದ ಆರೋಪದ ಮೇರೆಗೆ ಮೈಸೂರಿನಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪೊಲೀಸರಿಗೆ ಸಿಗದಂತೆ ತಲೆ ಮರೆಸಿಕೊಂಡಿದ್ದರು. ಮೈಸೂರು ಪೊಲೀಸರು ರವಿ ಬಂಧನಕ್ಕಾಗಿ ಶೋಧ ಕಾರ್ಯ ನಡೆಸಿದ್ದರು.

 

 

 

ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಹನ್ನೊಂದು ದಿನಗಳ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.

 

 

 

 

 

ಈ ಬಂಧನದಿಂದ ಕೆಲವೊಂದು ಪಕ್ಷದಲ್ಲಿ ಕಳವಳ ಶುರುವಾಗಿದ್ದು, ಹಲವರು ತಮ್ಮ ಅಸ್ತಿತ್ವಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!