ಬೈಕ್ ವ್ಹೀಲಿಂಗ್ ಮಾಡಿದ್ದೂ ಅಲ್ಲದೇ ಹಲ್ಲೇ ಮಾಡಿ ಪರಾರಿಯಾಗಿರುವ ಭೂಪ !

 

 

 

 

ತುಮಕೂರು : ಬೈಕ್ ವೀಲಿಂಗ್ ಮಾಡುವ ವೇಳೆ ಅಡ್ಡ ಬಂದ ಯುವತಿಗೆ ಗಲಾಟೆ ಮಾಡುತ್ತಿದ್ದನ್ನು ಪ್ರಶ್ನೆ ಸಿದ್ಧಕ್ಕೆ ಪುಂಡನೊಬ್ಬ ಯುವತಿಯ ಪರ ಮಾತನಾಡಿದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೇ ನಡೆಸಿರುವ ಘಟನೆ ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ನಡೆದಿದೆ.

 

 

 

 

 

 

 

ಇರ್ಫಾನ್ ಎಂಬ ವ್ಯಕ್ತಿ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪಿಯಾಗಿದ್ದು ಯುವತಿಯ ರಕ್ಷಣೆಗೆ ಮುಂದಾಗಿದ್ದ ಮತ್ತೋರ್ವ ಸಾಧಿಕ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಹಲ್ಲೆಗೊಳಗಾಗಿರುವ ಯುವಕನ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

 

 

 

 

 

 

ನಗರದ ಪ್ರಮುಖ ರಸ್ತೆಗಳಲ್ಲಿ ವೀಲಿಂಗ್ ಮಾಡುವ ಮೂಲಕ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಇರ್ಫಾನ್ ವೀಲಿಂಗ್ ಮಾಡುವ ಸಂದರ್ಭದಲ್ಲಿ ಯುವತಿ ಅಡ್ಡ ಬಂದಿದ್ದಕ್ಕೆ ಆಕೆಯನ್ನ ತಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಚುಡಾಯಿಸಿದ್ದ ಎನ್ನಲಾಗಿದ್ದು ಈ ವೇಳೆ ಯುವತಿಯ ರಕ್ಷಣೆಗೆ ಬಂದಿದ್ದ ಮತ್ತೋರ್ವ ಯುವಕ ಸಾಧಿಕ್ ಮೇಲೆ ಹಲ್ಲೇ ನಡೆಸಿ ಪರಾರಿಯಾಗಿದ್ದಾನೆ.

 

 

 

 

 

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ .

Leave a Reply

Your email address will not be published. Required fields are marked *

error: Content is protected !!